ಸನ್ಮಾರ್ಗ ವಾರ್ತೆ
ನವದೆಹಲಿ: ಇಡೀ ದೇಶದಾದ್ಯಂತ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂಬುದಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಆಶ್ವಾಸನೆ ನೀಡಿದ್ದಾರೆ.
ಕೊರೋನಾ ಲಸಿಕೆಯನ್ನು ವಿತರಿಸುವ ಬಗ್ಗೆ ಸನ್ನದ್ಧವಾಗಿರುವ ಕ್ರಮಗಳ ಕುರಿತು ಪರಿಶೀಲಿಸಲು ಸರ್ಕಾರ ಶನಿವಾರ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ನ್ನು ಆರಂಭಿಸಿದ್ದು, ಇಂದು ದೆಹಲಿಯ ಜಿಟಿಬಿ ಆಸ್ಪತ್ರೆಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರು ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಪ್ರಶ್ನಿಸಿದ್ದರು. ಕೇವಲ ದೆಹಲಿಯಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಕೋವಿಡ್-19 ಲಸಿಕೆ ಉಚಿತವಾಗಿ ಜನತೆಗೆ ದೊರಕಲಿದೆ ಎಂಬುದಾಗಿ ಅವರು ಜನತೆಗೆ ಆಶ್ವಾಸನೆ ನೀಡಿದ್ದಾರೆ.