ದೇರಳಕಟ್ಟೆ: ಜಮಾಅತೆ ಇಸ್ಲಾಮಿ ಹಿಂದ್ ನಿಂದ ಸಾರ್ವಜನಿಕ ಕೊಳವೆ ಬಾವಿ ಉದ್ಘಾಟನೆ

0
361

ಸನ್ಮಾರ್ಗ ವಾರ್ತೆ

ದೇರಳಕಟ್ಟೆ: ಉಳ್ಳಾಲ, ಜಮಾಅತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕ ದೇರಳಕಟ್ಟೆ ಇದರ ಆಶ್ರಯದಲ್ಲಿ ಕೊಳವೆ ಬಾವಿ ಉದ್ಘಾಟನಾ ಕಾರ್ಯಕ್ರಮವು ದೇರಳಕಟ್ಟೆಯ ಬದಿಯಾರ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್ ಐಓ ಮಾಜಿ ರಾಷ್ಟ್ರಾಧ್ಯಕ್ಷ ಲಬೀದ್ ಶಾಫಿ ಮಾತನಾಡಿ, ಪ್ರಬುದ್ಧ ಸಮಾಜ ಬೆಳೆಸುವುದು ನಮ್ಮ ಗುರಿ ಆಗಬೇಕು. ಇದರ ಹಿಂದೆ ಜಮಾತೆ ಇಸ್ಲಾಮಿ ಹಿಂದ್ ಮಹತ್ತರ ಸಾಧನೆ ಮಾಡುತ್ತಿದೆ ಎಂದು ಹೇಳಿದರು.

ಕೊಳವೆ ಬಾವಿಯನ್ನು ಉದ್ಘಾಟಿಸಿ ಮಾತನಾಡಿದ ಅಬೂಬಕ್ಕರ್ ಹಾಜಿಯವರು, ಜಮಾಅತೆ ಇಸ್ಲಾಮಿ ಹಿಂದ್ ಕುಡಿಯುವ ನೀರು ಸಹಿತ ಹಲವು ಸೇವೆಗಳನ್ನು ನೀಡುತ್ತಾ ಬಂದಿವೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಅಯ್ಯಪ್ಪ ದೇವಸ್ಥಾನ ಅಧ್ಯಕ್ಷ ಜಗದೀಶ ರೈ ಮಾತನಾಡಿದರು. ಬೆಳ್ಮ ಗ್ರಾ.ಪಂ.ಅಧ್ಯಕ್ಷ ಸಿ.ಎಂ.ಸತ್ತಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು .

ಬೆಳ್ಮ ಗ್ರಾ.ಪಂ.ಸದಸ್ಯರಾದ ಇಬ್ರಾಹಿಂ ಬದಿಯಾರ್, ಮುಹಮ್ಮದ್ ಹನೀಫ್, ಅಬ್ದುಲ್ ರಹಿಮಾನ್, ಹಿದಾಯತುಲ್ಲಾ, ಉಳ್ಳಾಲ ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಅಬ್ದುಲ್ ಕರೀಂ, ಉಪಾಧ್ಯಕ್ಷ ಅಬ್ದುಲ್ ರಹೀಂ ಉಪಸ್ಥಿತರಿದ್ದರು. ಹಿದಾಯತುಲ್ಲ ವಂದಿಸಿದರು.