ಒಳ್ಳೆಯವರಾಗಿರುವುದು ಅಂದ್ರೇನು?

0
2118

ಪಡುಬಿದ್ರಿ: ಬಸ್ಸು ಕಾಯುತ್ತಿದ್ದ ಮಹಿಳೆಯೊರ್ವರಿಗೆ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಬಡಾ ಎರ್ಮಾಳು ಕಲ್ಯಾಣಿ ಬಾರ್ ಬಳಿ ಸಂಭವಿಸಿದೆ.

ಹೆಜಮಾಡಿ ಮಾರುತಿ ರಸ್ತೆಯ ನಿವಾಸಿ ಜಾನಕಿ ಎಸ್ ಕೊಟ್ಯಾನ್ (60) ಎಂಬವರೆ ಮೃತಪಟ್ಟ ಮಹಿಳೆ ಇವರು ಎರ್ಮಾಳು ಕಲ್ಯಾಣಿ ಬಾರ್ ಪಕ್ಕದ ಬಸ್ಸು ನಿಲ್ದಾಣದ ಬಳಿ ಬಸ್ಸು ಕಾಯುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗು ಅಜಾಗರೂಕತೆಯಿಂದ ಲಾರಿ ಚಲಾಯಿಸಿಕೊಂಡು ಬಂದ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಜಾನಕಿಯವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ತಕ್ಷಣ ಪಡುಬಿದ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.