ಸನ್ಮಾರ್ಗ ವಾರ್ತೆ
ಬೆಂಗಳೂರು,ಅ.28: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಸರಕಾರವು 2020ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ. ಜಿಲ್ಲೆಯ ಮೂವರು ಹಾಗು ಉಡುಪಿಯ ಮೂವರು ಸೇರಿ ಒಟ್ಟು 65 ಮಂದಿಗೆ ಪ್ರಶಸ್ತಿ ಪ್ರಕಟಿಸಿದೆ.
ನವೆಂಬರ್ 7ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆವ ಕಾರ್ಯಕ್ರಮದಲ್ಲಿ ಪುರಸ್ಕತರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ (ವಲ್ಲಿವಗ್ಗ), ಸಂಗೀತದಲ್ಲಿ ಸಾಧನೆ ಮಾಡಿದ ಕೆ. ಲಿಂಗಪ್ಪ ಶೇರಿಗಾರ್ ಕಟೀಲು, ನ್ಯಾಯಾಂಗದಲ್ಲಿ ಕ್ಷೇತ್ರದಲ್ಲಿ ಎಂ.ಕೆ. ವಿಜಯ ಕುಮಾರ್ ಉಡುಪಿ, ಸಂಘ-ಸಂಸ್ಥೆಗಳಲ್ಲಿ ಸಾಧನೆ ಮಾಡಿದ ಧರ್ಮೋತ್ತಾನ ಟ್ರಸ್ಟ್ ಧರ್ಮಸ್ಥಳ, ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಮಣೆಗಾರ್ ಮೀರಾನ್ ಸಾಹೇಬ್ ಉಡುಪಿ, ವಿಜ್ಞಾನ/ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರೊ. ಉಡುಪಿ ಶ್ರೀನಿವಾಸ ಸೇರಿ 65 ಮಂದಿಗೆ 2020ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.