ನಾನು ಆರ್‌ಎಸ್‌ಎಸ್ ಸ್ವಯಂ ಸೇವಕ: ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿಕೆ

0
315

ಸನ್ಮಾರ್ಗ ವಾರ್ತೆ

ನಾನು ಕಾಂಗ್ರೆಸ್ ಶಾಸಕನಾಗಿದ್ದರೂ ಆರ್‌ಎಸ್‌ಎಸ್ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದ್ದಾರೆ. ನಾನು ಜಾತ್ಯತೀತವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದೂ ತಮ್ಮಯ್ಯ ಹೇಳಿದ್ದಾರೆ.

ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಆರ್‌ಎಸ್‌ಎಸ್ ಸ್ವಯಂ ಸೇವಕ ಎಂದಿದ್ದಾರೆ.

ನಾನು ಜಾತ್ಯತೀತವಾಗಿ ಕಾರ್ಯ ನಿರ್ವಹಿಸುತ್ತೇನೆ. ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಹಿಂದೆ ಕಾರ್ಯಕ್ರಮಗಳಿಗಾಗಿ ದಾನಿಗಳ ಬಳಿ ಹೋದಾಗ 500 ರೂ ದೊಡ್ಡ ಹಣ, ಅದು ವಸೂಲಿ ಅಲ್ಲ, ಸಂಗ್ರಹ ಎಂದು ಹೇಳಿಕೊಟ್ಟಿದ್ದೇ ಆರ್‌ಎಸ್‌ಎಸ್ ಎಂದು ಅವರು ಹಿಂದಿನ ಘಟನೆಗಳನ್ನು ನೆನಪು ಮಾಡಿಕೊಂಡಿದ್ದಾರೆ.