ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಣೆ

0
160

ಸನ್ಮಾರ್ಗ ವಾರ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದ್ವೇಷಕ್ಕೆ ಬಲಿಯಾದ ಫಾಝಿಲ್, ಮಸೂದ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯ ಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್, ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಹಾಗೂ 2022 ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು .