ಪ್ರಜ್ಞಾ ಸಿಂಗ್ ಠಾಕೂರ್ ಅಭ್ಯರ್ಥಿತ್ವದ ವಿರುದ್ಧ ದೂರು

0
689

ಭೋಪಾಲ,ಎ. 18: ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ, ಸನ್ಯಾಸಿನಿ ಪ್ರಜ್ಞಾಸಿಂಗ್ ಠಾಕೂರ್‍ರ ಅಭ್ಯರ್ಥಿತ್ವದ ವಿರುದ್ಧ ದೂರು ನೀಡಲಾಗಿದ್ದು ಅನಾರೋಗ್ಯದ ಕಾರಣಗಳನ್ನು ಮುಂದಿಟ್ಟು ಅವರು ಜಾಮೀನು ಪಡೆದುಕೊಂಡಿದ್ದಾರೆ. ಈಗ ಬಿಜೆಪಿ ಟಿಕೆಟಿನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಎನ್‍ಐಎ ಕೋರ್ಟಿನಲ್ಲಿ ದೂರು ನೀಡಲಾಗಿದೆ. ಹಿಂದುತ್ವ ಭಯೋತ್ಪಾದನೆಯ ವಿರುದ್ಧ ಧ್ವನಿಯೆತ್ತಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯರ್ ಸಿಂಗ್ ವಿರುದ್ಧ ಪ್ರಜ್ಞಾ ಸ್ಪರ್ಧಿಸಲಿದ್ದಾರೆ.

ಅನಾರೋಗ್ಯವಿರುವ ಪ್ರಜ್ಞಾ ಪ್ರಚಾರ ನಡೆಸಲು ಹೇಗೆ ಸಾಧ್ಯ ಎಂದು ಮಾಜಿ ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲ ಪ್ರಶ್ನಿಸಿದ್ದರು. ಇದೇ ವೇಳೆ ಚುನಾವಣೆಯಲ್ಲಿ ತನ್ನ ಪ್ರಚಾರ ರಾಷ್ಟ್ರೀಯತೆ ಮತ್ತು ಹಿಂದುತ್ವವಾಗಿದೆ ಎಂದುಇಂದು ಪ್ರಜ್ಞಾ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎಪ್ರಿಲ್ 23ಕ್ಕೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ.