ಕರ್ನಾಟಕ: ದೋಸ್ತಿಗಳ ವಿರುದ್ಧ ಕೆಲಸ ಮಾಡಿದರೆ ಶಿಸ್ತು ಕ್ರಮ _ ರಾಹುಲ್ ಗಾಂಧಿ ಘೋಷಣೆ

0
555

ಹೊಸದಿಲ್ಲಿ,ಮಾ.30: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದರೆ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಮನ್ನೆಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಮೂಲಗಳ ಪ್ರಕಾರ ಕಾಂಗ್ರೆಸ್ ಅಧ್ಯಕ್ಷರು ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಬಾರದು ಎಂದು ಪಾರ್ಟಿಯ ಎಲ್ಲ ಸದಸ್ಯರಿಗೂ ಮನವಿ ನೀಡಿದ್ದಾರೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸವುದು ಸದ್ಯದ ಅಗತ್ಯವಾಗಿದೆ ಎಂದಿರುವ ರಾಹುಲ್ ಗಾಂಧಿ ಆದ್ದರಿಂದ ಯಾರು ಕೂಡಾ ಜಾತ್ಯತೀತ ಶಕ್ತಿ ದುರ್ಬಲಗೊಳ್ಳುವಂತಹ ಯಾವುದೇ ಕೆಲಸವನ್ನು ಮಾಡಬಾರದೆಂದು ಪಕ್ಷದ ಸದಸ್ಯರಿಗೆ ರಾಹುಲ್ ಗಾಂಧಿ ಕಿವಿ ಮಾತು ಹೇಳಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಸಾಮರಸ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿಗೆ ವಿವರ ದೊರಕಿದ ಹಿನ್ನೆಲೆಯಲ್ಲಿ ಅವರು ತನ್ನ ಪಕ್ಷದ ಕಾರ್ಯಕರ್ತರು ಮತ್ತು ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಬಂಡಾಯ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದ ರಾಹುಲ್ ಗಾಂಧಿ ಪಕ್ಷದ ಹಿತದ ವಿರುದ್ಧ ಕೆಲಸ ಮಾಡಿದರೆ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಹೇಳಿದರು.