ರಾಯಚೂರು ವಿಶ್ವವಿದ್ಯಾಲಯ ಶೀಘ್ರ ಸ್ಥಾಪನೆ ಮಾಡಲು ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ದೇವೆಗೌಡರಿಂದ ಶಿಫಾರಸು

0
755

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯ ಶೀಘ್ರ ಸ್ಥಾಪನೆ ಮಾಡಲು ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ದೇವೆಗೌಡರು ಇಂದು ಶಿಫಾರಸು ಮಾಡಿದ್ದಾರೆ.

ಎಸ್.ಐ.ಓ ಕರ್ನಾಟಕ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು ನೇತೃತ್ವದ ನಿಯೋಗ ಭೇಟಿ ಕೊಟ್ಟು ಮಾಜಿ ಪ್ರಧಾನಿಯವರಲ್ಲಿ ರಾಯಚೂರು ವಿಶ್ವವಿದ್ಯಾಲಯ ಚುನಾವಣಾ ನೀತಿ ಸಂಹಿತೆ ಆರಂಭವಾಗುವ ಮುನ್ನ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ ಮುಖ್ಯಮಂತ್ರಿಗಳಿಗೆ ಕೂಡಲೇ ಶಿಫಾರಸು ಮಾಡಿ ರಾಯಚೂರು ವಿಶ್ವವಿದ್ಯಾಲಯವನ್ನು ಕೂಡಲೇ ಸ್ಥಾಪನೆ ಮಾಡಬೇಕೆಂದು ಹೇಳಿದ್ದಾರೆ. ಮತ್ತು ಎಸ್.ಐ.ಓ ಮನವಿ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ರವಾನಿಸಿದ್ದಾರೆ.