ಸನ್ಮಾರ್ಗ ವಾರ್ತೆ
ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಡುವಿನಕೋಡಿ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಆದೇಶದ ಮೇರೆಗೆ ರೈತರೊಂದಿಗೊಂದು ದಿನ ಹೆಸರಿನ ವಿನೂತನ ಕಾರ್ಯಕ್ರಮ ಆಯೋಜಿಸಿಲಾಗಿತ್ತು.
ಈ ಕಾರ್ಯಕ್ರಮವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ತೋಟಗಾರಿಕೆ ಸಚಿವ ಉದ್ಘಾ ಟಿಸಿದರು. ಬಳಿಕ ಇಬ್ಬರು ಸಚಿವದ್ವಯರು ರೈತರಂತೆ ತಲೆಗೆ ಹಸಿರು ಪೇಟ ಸುತ್ತಿಕೊಂಡು ರೈತರ ಜಮೀನಿನಲ್ಲಿ ಟ್ರ್ಯಾಕ್ಟರ್ ಚಲಾಯಿಸಿ, ರಾಗಿ ಪೈರು ನಾಟಿ ಮಾಡಿ ಮಾಡಿದ್ದರು.
ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಡುವಿನ ಕೋಡಿ ಗ್ರಾಮದಲ್ಲಿ ನೆನ್ನೆ ರಾಜ್ಯದ ಇಬ್ಬರು ಸಚಿವರು ರೈತರಂತೆ ಜಮೀನಿಗಿಳಿದು ಕೃಷಿ ಕೆಲಸದಲ್ಲಿ ಭಾಗಿಯಾಗಿದ್ದರು. ಅಲ್ಲದೇ ಜಮೀನಿಗಿಳಿದು ರಾಗಿ ಪೈರು ನಾಟಿ ಮಾಡಿ, ಭತ್ತದ ಗದ್ದೆಗೆ ಗೊಬ್ಬರ ಹಾಕಿದ್ದರು. ಸಚಿವರು ಭತ್ತದ ಬೆಳೆಗೆ ಗೊಬ್ಬರ ಹಾಕುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಇದೀಗ ಸಖತ್ ವೈರಲ್ ಆಗಿ ಟ್ರೋಲ್ ಆಗುತ್ತಿದೆ.