ಸನ್ಮಾರ್ಗ ವಾರ್ತೆ
ಮಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ವತಿಯಿಂದ ನಡೆದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಎಂಬುವವರು ಅಝಾನ್ನ ಅರ್ಥವನ್ನು ದುರ್ವ್ಯಾಖಾನ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಡಿಸೆಂಬರ್ 13ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿಯಲ್ಲಿ ಆಯೋಜಿಸಿದ್ದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಭಾಷಣ ಮಾಡುತ್ತಾ ಅಝಾನ್ನ ಬಗ್ಗೆ ದುರ್ವಾಖ್ಯಾನ ಮಾಡಿ ಐದು ಹೊತ್ತು ಅಝಾನ್ನಲ್ಲಿ ಕಾಫಿರ್ಗಳನ್ನು ಅಥವಾ ಮುಸ್ಲಿಮೇತರನ್ನು ಕೊಲ್ಲಲು ಕರೆ ನೀಡಲಾಗುತ್ತದೆ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಆ ಮೂಲಕ ಹಿಂದು-ಮುಸ್ಲಿಮರ ನಡುವೆ ಒಡುಕನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಯತ್ನಿಸಿದ್ದಾರೆ ಎಂದು ಪಿಎಫ್ಐ ಸದಸ್ಯ ಶಬೀರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.