ಅನುಪಮ ಮಹಿಳಾ ಮಾಸಿಕದ ಪ್ರಧಾನ ಸಂಪಾದಕಿ, ಸಾಹಿತಿ ಶಹನಾಝ್.ಎಂ‌ ಅವರಿಗೆ ‘ತುಳುನಾಡ ರಜತ ಸಿರಿ ರಾಜ್ಯ ಪ್ರಶಸ್ತಿ’

0
253

ಸನ್ಮಾರ್ಗ ವಾರ್ತೆ

ಉಡುಪಿ: ಸಾಹಿತಿ ಹಾಗೂ ಅನುಪಮ ಮಹಿಳಾ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್.ಎಂ ಅವರಿಗೆ ‘ತುಳುನಾಡ ರಜತ ಸಿರಿ ರಾಜ್ಯ ಪ್ರಶಸ್ತಿ’ ದೊರೆತಿದೆ. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಡಾ. ಶೇಖರ ಅಜೆಕಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 25 ಮಂದಿಯನ್ನು, ಐದು ಸಂಸ್ಥೆಗಳನ್ನು ಗುರುತಿಸಿ ಸನ್ಮಾನಿಸಲಾಗಿದ್ದು, ಪೊವಾಯಿ ಕನ್ನಡ ಸೇವಾ ಸಂಘ ಮುಂಬಯಿ ಮತ್ತು ಉಡುಪಿ ಜಿಲ್ಲೆಯ ರಜತ ಸಂಭ್ರಮಕ್ಕೆ ಉಡುಪಿ ಅಂಬಲಪಾಡಿಯ ಭವಾನಿ ಮಂಟಪದಲ್ಲಿ ಅಕ್ಟೋಬರ್ 16ರಂದು ಪ್ರಪ್ರಥಮ ‘ಮುಂಬೈ ವಾಪಸಿಗರ ಸಮ್ಮಿಲನ 2022’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮ್ಮೇಳನದ ಅಧ್ಯಕ್ಷರೂ, ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ರಿಜಿಸ್ಟ್ರಾರ್ ಡಾ.ಸುಬ್ಬಣ್ಣ ರೈ ಯವರು ಸಾಧಕರನ್ನು ಸನ್ಮಾನಿಸಿದರು.