ಯಡಿಯೂರಪ್ಪ ವಿರುದ್ಧದ ಕೇಸ್ ದ್ವೇಷ ರಾಜಕಾರಣ ಎನ್ನುವುದಾದರೆ ಇದೆಲ್ಲ ಏನು?: ಬಿಜೆಪಿಗೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

0
262

ಸನ್ಮಾರ್ಗ ವಾರ್ತೆ

ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನನ್ನ ವಿರುದ್ಧ ಡಿಕೆ ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದ್ರಲ್ಲ, ಅದಕ್ಕೆ ಏನೆಂದು ಕರೆಯಬೇಕು ಎಂದು ಸಿದ್ದರಾಮಯ್ಯ ಮರು ಪ್ರಶ್ನೆ ಹಾಕಿದ್ದಾರೆ.

ರಾಹುಲ್ ಗಾಂಧಿಯ ಸದಸ್ಯತ್ವವನ್ನೇ ಬಿಜೆಪಿ ರದ್ದು ಗೊಳಿಸಿತಲ್ಲ, ಅದಕ್ಕೆ ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳಿಸಿದ್ದಾರಲ್ಲ,ಅದಕ್ಕೆ ಏನೆಂದು ಕರೆಯುವುದು? ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಅಥವಾ ಪ್ರೀತಿಯ ರಾಜಕಾರಣ ಎನ್ನಬೇಕಾ?

ಸೇಡಿನ ರಾಜಕಾರಣ ಮಾಡುವವರು ಅವರು. ಅದೇ ಬಿಜೆಪಿಯ ಕೆಲಸ. ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ಇಂದಿನವರೆಗೂ ಯಾರ ಮೇಲೂ ಸೇಡಿನ ರಾಜಕಾರಣ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.