ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

0
316

ಸನ್ಮಾರ್ಗ ವಾರ್ತೆ

ನವದೆಹಲಿ: ಆಪಾದಿತ ಮದ್ಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ನಲ್ಲಿ ಕೇಂದ್ರ ತನಿಖಾ ದಳದಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಆಮ್ ಆದ್ಮಿ ಪಕ್ಷದ ನಾಯಕ ಈಗ ಜೈಲಿನಿಂದ ಹೊರಬರಬಹುದು – ವಿಚಾರಣೆಯಿಲ್ಲದೆ ಸುಮಾರು ಆರು ತಿಂಗಳ ಜೈಲುವಾಸದ ನಂತರ ಇದೀಗ ಅವರಿಗೆ ಜಾಮೀನು ದೊರಕಿದೆ.