ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆ

0
254

ಸನ್ಮಾರ್ಗ ವಾರ್ತೆ

ದೆಹಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಊಹಾಪೋಹಕ್ಕೆ ತೆರೆ ಬಿದ್ದಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಮರ್ಲೆನಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ ಸಭೆ ನಡೆದಿತ್ತು, ಈ ಅವಧಿಯಲ್ಲಿ ಅನೇಕ ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅತಿಶಿ ಅವರ ಹೆಸರನ್ನು ಮುಂದಿಟ್ಟರು. ಸಭೆಯಲ್ಲಿ ಅತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು ಮತ್ತು ಇತರ ನಾಯಕರು ಅವರನ್ನು ಬೆಂಬಲಿಸಿದರು.

ದೆಹಲಿಯ ಮದ್ಯ ನೀತಿಯ ಪ್ರಕರಣದಲ್ಲಿ ಎಎಪಿ ನಾಯಕರು ಜೈಲಿಗೆ ಹೋಗಬೇಕಾದಾಗ, ಅತಿಶಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರು ಪಕ್ಷಕ್ಕೆ ಅಪಾರ ನಿಷ್ಠೆ ತೋರಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಅವರನ್ನು ಸೆಪ್ಟೆಂಬರ್ 13 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದಾದ ಬಳಿಕ ಸೆ.15ರಂದು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಸಾರ್ವಜನಿಕರು ತೀರ್ಪು ನೀಡುವವರೆಗೂ ಸಿಎಂ ಸ್ಥಾನದಲ್ಲಿ ಕೂರುವುದಿಲ್ಲ ಎಂದವರು ಹೇಳಿದ್ದರು.

ಕೇಜ್ರಿವಾಲ್ ಅವರು ಹುದ್ದೆ, ಸಂಪತ್ತಿನ ದುರಾಸೆಯಿಲ್ಲ ಎಂಬ ಸಂದೇಶ ನೀಡಲು ಬಯಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಕಳೆದ ವಾರ ಮದ್ಯ ನೀತಿ ಪ್ರಕರಣದಲ್ಲಿ ಜಾಮೀನು ಪಡೆದ ಕೇಜ್ರಿವಾಲ್ ಅವರು ಸೆಪ್ಟೆಂಬರ್ 15 ರಂದು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.