ಸನ್ಮಾರ್ಗ ವಾರ್ತೆ
ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಬೋಳಾರ ವತಿಯಿಂದ ಸೆಪ್ಟೆಂಬರ್ 20 ರಂದು ನಗರದ ಶಾದಿ ಮಹಲ್ ನಲ್ಲಿ ಸೀರತ್ ಅಭಿಯಾನದ ಅಂಗವಾಗಿ ವಿಚಾರ ವಿನಿಮಯ ಕಾರ್ಯಕ್ರಮ ಆಯೋಜಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿ.ಎಸ್.ಶರ್ಫುದ್ದೀನ್ ಅವರು ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ ಎಂಬ ವಿಷಯದಲ್ಲಿ ವಿಷಯ ಮಂಡಿಸಿದರು. ಬಳಿಕ ಸಭಿಕರೊಂದಿಗೆ ವಿಚಾರ ವಿನಿಮಯ ಮಾಡಲಾಯಿತು.
ಆರಂಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಬೋಳಾರ ಸಂಚಾಲಕರಾದ ಮುಹಮ್ಮದ್ ಹನೀಫ್ ರವರು ಸ್ವಾಗತ ಭಾಷಣ ಮಾಡಿದರು. ರಹ್ಮತುಲ್ಲಾ ರವರು ನಿರೂಪಿಸಿ ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು.