ಸನ್ಮಾರ್ಗ ವಾರ್ತೆ
ಉಳ್ಳಾಲ: ಸೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ‘ಬದಲಾವಣೆಯ ಚಿಂತನೆಯನ್ನು ಮರು ಪರಿಶೀಲಿಸೋಣ’ ಎಂಬ ಧೈಯ ವಾಕ್ಯದೊಂದಿಗೆ ಜಿಲ್ಲಾ ಸಮ್ಮೇಳನವು ಅ.12ರಂದು ಸಂಜೆ 4ಕ್ಕೆ ತೊಕ್ಕೊಟ್ಟು ಯೂನಿಟಿ ಹಾಲ್ ಬಳಿ ನಡೆಯಲಿದೆ ಎಂದು ಎಸ್ಐಓ ದ.ಕ. ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಮಾಅತೆ ಇಸ್ಲಾಮೀ ಕೇರಳ ಉಪಾಧ್ಯಕ್ಷ ವಿ.ಟಿ.ಅಬ್ದುಲ್ಲಾ ಕೋಯ ತಂಜಳ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ರಮೀಝ್ ಇ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಎಸ್ಐಒ ಕರ್ನಾಟಕ ರಾಜ್ಯಾಧ್ಯಕ್ಷ ಜೀಶಾನ್ ಅಖಿಲ್, ಸಲೀಂ ಮಂಬಾಡ್, ಜಮಾಅತೆ ಇಸ್ಲಾಮೀ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮುಹಮ್ಮದ್ ಮುಸ್ತಫಾ, ಸಲ್ವಾನ್, ಮಂಗಳೂರು ನಗರಾಧ್ಯಕ್ಷ ಮುಂಝಿರ್ ಅಹ್ಸನ್, ಸಮ್ಮೇಳನ ಸಂಚಾಲಕ ಹುನೈನ್ ಹುಸೇನ್ ಉಪಸ್ಥಿತರಿದ್ದರು.