ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕದ ಹೊಸ ಸ್ಪೀಕರ್

0
398

ಬೆಂಗಳೂರು, ಜು. 31: ಕರ್ನಾಟಕ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಹಿರಿಯ ಬಿಜೆಪಿ ನಾಯಕ ಹಾಗೂ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆಯಾಗಿದ್ದಾರೆ. ಎಚ್‍ಡಿ ಕುಮಾರ ಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಖ್ಯ ಸರಕಾರವನ್ನು ವಿಶ್ವಾಸ ಮತಗಳ ಮೂಲಕ ಮಗುಚಿ ಹಾಕಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಕಾಗೇರಿಯಲ್ಲದೆ ಬೇರೆ ಯಾರೂ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿಲ್ಲ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ನಾಯಕರಾದ ಗೋವಿಂದ್ ಕಾರಜೋಳ, ಆರ್. ಅಶೋಕ್, ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಎಸ್. ಸುರೇಶ್ ಕುಮಾರ್ ಜೊತೆಗೆ ಬಂದು ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಸ್ಪೀಕರ್ ಸ್ಥಾನಕ್ಕೆ ಔಪಚಾರಿಕ ಚುನಾವಣೆ ಬುಧವಾರ ವಿಧಾನಸಭೆಯಲ್ಲಿ ನಡೆದಿದೆ.

ಅಂಕೋಳ ವಿಧಾನಸಭಾ ಕ್ಷೇತ್ರದಿಂದ ಕಾಗೇರಿ ಆರು ಬಾರಿ ಗೆದ್ದು ಬಂದಿದ್ದಾರೆ. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಅವರಿಗಿದೆ.