ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ಮುಂದಿನ ವರ್ಷ ನಡೆಯುವ ಆರು ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ದೆಹಲಿ ಸಿಎಂ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ ಪಂಜಾಬ್ಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ.
ಆಮ್ ಆದ್ಮಿ ಪಾರ್ಟಿ(AAP)ಯ ಒಂಬತ್ತನೇ ಕಾರ್ಯಕಾರಿಣಿಯಲ್ಲಿ ಅವರು ಮಾತಾಡುತ್ತಿದ್ದರು. ಉತ್ತರ ಪ್ರದೇಶ, ಉತ್ತರಖಂಡ, ಗೋವಾ ಗುಜರಾತ್, ಹಿಮಾಚಲ ಪ್ರದೇಶ, ಪಂಜಾಬ್ಗಳ ವಿಧಾನಸಭೆಗೆ ಸ್ಪರ್ಧಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದರು. ಆರು ರಾಜ್ಯಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದಲ್ಲಿದೆ.
ದಿಲ್ಲಿಯಲ್ಲಿ ಜನವರಿ 26ಕ್ಕೆ ನಡೆದ ರೈತರ ಟ್ರಾಕ್ಟರ್ ಪರೇಡಿನಲ್ಲಿ ಸಂಭವಿಸಿದ ಘಟನೆಗಳ ವಿರುದ್ಧ ಕ್ರಮ ಜರಗಿಸಲು ಆಗ್ರಹಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.