ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದ ನಿವೃತ್ತ ಶಿಕ್ಷಕ ಅಬ್ದುಲ್ ಖಾದರ್ ನಿಧನ

0
615

ಸನ್ಮಾರ್ಗ ವಾರ್ತೆ

ಬಂಟ್ವಾಳ: ಬಂಟ್ವಾಳದ ನಾವೂರು ಅಗ್ರಹಾರ ನಿವಾಸಿ ಎನ್. ಅಬ್ದುಲ್ ಖಾದರ್ (86) ಬುಧವಾರ ರಾತ್ರಿ 10ರ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನಿವೃತ್ತ ಶಿಕ್ಷಕ ಅಬ್ದುಲ್ ಖಾದರ್ ಅವರು ಅಗ್ರಹಾರ ಜುಮಾ ಮಸೀದಿ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದ ಇವರು, ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದರು. ಅಲ್ಲದೇ ಸಮಾಜ ಸೇವೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿದ್ದರು.

ಅಬ್ದುಲ್ ಖಾದರ್ ಅವರು ಪತ್ನಿ, 4 ಗಂಡು, 4 ಹೆಣ್ಣು ಮಕ್ಕಳ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಗುರುವಾರ ಬೆಳಗ್ಗೆ ಫಝರ್ ನಮಾಝಿನ ಬಳಿಕ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.