ಸನ್ಮಾರ್ಗ ವಾರ್ತೆ
‘ವಾರ್ತಾಭಾರತಿ’ ಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರಿಗೆ, ಕರ್ನಾಟಕ ಪ್ರಾಂತೀಯ ಕೆಥೊಲಿಕ್ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ 2024ನೇ ಸಾಲಿನ “ಸಂದೇಶ ಪ್ರಶಸ್ತಿ” ಲಭಿಸಿದೆ.
ಮಾಧ್ಯಮ ಕ್ಷೇತ್ರದಲ್ಲಿ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಸೌಹಾರ್ದತೆಗೆ ಸಲ್ಲಿಸಿದ ಅಪೂರ್ವ ಸೇವೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಬಂದಿದೆ.