ಮಂದಿರದ ಆವರಣದಲ್ಲಿ ಗೋಮಾಂಸ ಪತ್ತೆ ಆರೋಪ; ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸ್ಥಳೀಯ ಬಿಜೆಪಿ ಮುಖಂಡ

0
232

ಸನ್ಮಾರ್ಗ ವಾರ್ತೆ

ದೆಹಲಿಯ ಸಂಗಮ್ ವಿಹಾರದ ಮಂದಿರ ಪರಿಸರದಲ್ಲಿ ಗೋಮಾಂಸ ಪತ್ತೆಯಾಗಿದೆ ಎಂದು ಬಿಜೆಪಿ ನಾಯಕ ಹೇಳಿದ್ದು, ಆ ಪ್ರದೇಶದ ಮುಸ್ಲಿಮರಿಗೆ ಕೊಲೆ ಬೆದರಿಕೆ ಒಡ್ಡಿದ್ದಾನೆ .

ಮುಂದಿನ 48 ಗಂಟೆಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಈ ಪ್ರದೇಶದ ಸರ್ವ ಮುಸ್ಲಿಮರನ್ನೂ ಹತ್ಯೆ ಮಾಡುವುದಾಗಿ ಆತ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಮುಸ್ಲಿಮರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

ಗೋಮಾಂಸ ಪತ್ತೆಯಾಗಿದೆ ಎಂದು ಹೇಳಿ ಜೂನ್ 23ರಂದು ಪ್ರತಿಭಟನೆ ನಡೆದಿತ್ತು. ಪ್ರತಿಭಟನಾಕಾರರ ಮಧ್ಯೆ ನಿಂತಿದ್ದ ಬಿಜೆಪಿ ನಾಯಕ ಪೊಲೀಸರಿಗೆ ಬೆದರಿಕೆ ಒಡ್ಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೆಯಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಾ ಇದೆ ಮತ್ತು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.