ಬೆಂಗಳೂರು ನಗರ ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ

0
356

ಸನ್ಮಾರ್ಗ ವಾರ್ತೆ

ಬೆಂಗಳೂರು: ಬಿಜೆಪಿಯ ಬೆಂಗಳೂರು ನಗರ ಘಟಕದ ವಕ್ತಾರರಾಗಿ ನಟ ಜಗ್ಗೇಶ್‌ರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಸ್ಯಾಂಡಲ್‌ವುಡ್‌ ನಟ ದರ್ಶನ್‌ರವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿ ಜಗ್ಗೇಶ್ ಇತ್ತೀಚಿಗೆ ಭಾರೀ ಸುದ್ದಿಯಲ್ಲಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಒಟ್ಟು 10 ನಗರಗಳಿಗೆ 10 ಮಂದಿಯನ್ನು ನೇಮಿಸಿ ಬಿಜೆಪಿ ಆದೇಶ ಹೊರಡಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗ್ಗೇಶ್ ಅವರು ಬಿಜೆಪಿ ಟಿಕೆಟ್ ನಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ತದನಂತರ ಹೆಚ್ಚಾಗಿ ಸಿನೆಮಾ ಮತ್ತು ರಿಯಾಲಿಟಿ ಶೋಗಳಲ್ಲಿ ತೊಡಗಿಸಿಕೊಂಡ್ದ ಅವರಿಗೆ ಇದೀಗ ಪಕ್ಷದಲ್ಲಿ ಮತ್ತೆ ಸ್ಥಾನಮಾನ ಲಭಿಸಿದೆ. ಪಕ್ಷದಲ್ಲಿ ತಮ್ಮನ್ನು ಗುರುತಿಸಿ ಜವಾಬ್ದಾರಿ ನೀಡಿದ್ದಕ್ಕಾಗಿ ನಟ ಜಗ್ಗೇಶ್ ಬಿಜೆಪಿ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.