ಸನ್ಮಾರ್ಗ ವಾರ್ತೆ
ಕೊಲ್ಕತ್ತಾ: ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿಯನ್ನು ತೊರೆದು ಟಿಎಂಸಿ ಸೇರಿರುವ ಬಾಬುಲ್ ಸುಪ್ರಿಯೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಪಕ್ಷದ ಅಧ್ಯಕ್ಷ ಸುವೇಂದು ಅಧಿಕಾರಿ, ಬಾಬುಲ್ ಸುಪ್ರೀಯೋರವರ ನಿರ್ಗಮನದಿಂದ ಬಿಜೆಪಿಗೆ ನಷ್ಟವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಬಾಬುಲ್ ಸುಪ್ರಿಯೋ ಪಕ್ಷ ಬಿಡುವ ಮುನ್ನ ಬಿಜೆಪಿಗೆ ಹೇಳಬೇಕಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಅವರ ನಿರ್ಗಮನದಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಅವರು ಸಾಮೂಹಿಕ ನಾಯಕರಲ್ಲ ಮತ್ತು ಉತ್ತಮ ರಾಜಕೀಯ ಸಂಘಟಕರಲ್ಲ. ಆದಾಗ್ಯೂ, ವೈಯಕ್ತಿಕವಾಗಿ, ಅವರು ನನ್ನ ಒಳ್ಳೆಯ ಸ್ನೇಹಿತರಾಗಿದ್ದಾರೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ತಿಳಿಸಿದ್ದಾರೆ.