ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

0
409

ಸನ್ಮಾರ್ಗ ವಾರ್ತೆ

ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಚೇರಿಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷರಾದ ಅಡ್ವೊಕೇಟ್ ತಾಹಿರ್ ಹುಸೇನ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್, ರಾಜ್ಯ ಮಾಧ್ಯಮ ಕಾರ್ಯದರ್ಶಿ ಜಾಗಿರ್ದಾರ್, ವೆಲ್ಫೇರ್ ಪಾರ್ಟಿಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರು ತಲತ್ ಯಾಸ್ಮಿನ್, ಆಸಿಫ್ , ಸೈಯದ್, ಫಸಲ್, ಇರ್ಫಾನ್ ರೋಣ, ಅಬ್ದುಲ್ ಸಲಾಂ ಕಾರ್ಯಕ್ರಮದಲ್ಲಿ ಇದ್ದರು.