ಅಲ್ಪಸಂಖ್ಯಾತರ ವಿಶ್ವಾಸ ಗಳಿಸಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಕರೆ

0
146

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಚಲನ ಚಿತ್ರಗಳಂತಹ ಅಪ್ರಸ್ತುತ ವಿಚಾರಗಳ ಕುರಿತು ಹೇಳಿಕೆ ನೀಡುವುದರಿಂದ ದೂರ ಉಳಿಯಿರಿ ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿರುವ ನರೇಂದ್ರ ಮೋದಿ, ಅಲ್ಪಸಂಖ್ಯಾತ ಸಮುದಾಯಗಳನ್ನು ತಲುಪಿ, ರಾಜಕೀಯ ಲಾಭದ ಅಪೇಕ್ಷೆ ಇಲ್ಲದೆ ಅವರಿಗಾಗಿ ದುಡಿಯಬೇಕು ಎಂದು ಕರೆ ನೀಡಿದ್ದಾರೆ.

ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಬೊಹ್ರಾ, ಪಸ್ಮಂದ ಮತ್ತು ಸಿಖ್ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳನ್ನು ಒಳಗೊಂಡಂತೆ ಸಮಾಜದ ಎಲ್ಲ ವರ್ಗದ ಜನರನ್ನು ತಲುಪಿ, ಯಾವುದೇ ರಾಜಕೀಯ ಲಾಭದ ಅಪೇಕ್ಷೆ ಇಲ್ಲದೆ ಅವರಿಗಾಗಿ ದುಡಿಯಬೇಕು” ಎಂದು ಬಿಜೆಪಿ ಸದಸ್ಯರಿಗೆ ಕರೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಭಾಷಣ ಮಾಡಿದ ಅವರು, 2024ರ ಲೋಕಸಭಾ ಚುನಾವಣೆಗೆ ಸುಮಾರು 400 ದಿನ ಮಾತ್ರ ಬಾಕಿ ಉಳಿದಿದ್ದು, ಪಕ್ಷದ ಕಾರ್ಯಕರ್ತರು ಸಮಾಜದ ಎಲ್ಲ ವರ್ಗಗಳಿಗಾಗಿ ಪೂರ್ಣ ನಿಷ್ಠೆಯಿಂದ ದುಡಿಯಬೇಕು ಎಂದು ಸೂಚಿಸಿದ್ದಾರೆ. “ಯಾರು ಪಣ ತೊಡುತ್ತಾರೆಯೋ, ಅವರು ಇತಿಹಾಸ ನಿರ್ಮಿಸುತ್ತಾರೆ. ಬಿಜೆಪಿ ಕೂಡಾ ಪಣ ತೊಟ್ಟು, ಇತಿಹಾಸ ಸೃಷ್ಟಿಸಬೇಕು” ಎಂದು ನರೇಂದ್ರ ಮೋದಿಯವರು ಈ ಸಂದರ್ಭದಲ್ಲಿ ಕರೆ ನೀಡಿದರು.