ಭೋಪಾಲ: ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಬಸ್ ನಿಂತಿದ್ದ ಲಾರಿಗೆ ಢಿಕ್ಕಿ; 39 ಮಂದಿಗೆ ಗಾಯ

0
303

ಸನ್ಮಾರ್ಗ ವಾರ್ತೆ

ಭೋಪಾಲ್: ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಬಸ್ಸ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಖರ್ಗಾಂವ್ ಜಿಲ್ಲೆಯ ಕಸ್ರವಾಡದಲ್ಲಿ ಭಾನುವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಖಪರಾಜಮ್ಲಿ, ರೂಪಗಢ ಮತ್ತು ರೈಸಾಗರದ ಕಾರ್ಯಕರ್ತರು ಬಸ್ಸಿನಲ್ಲಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಮಹಾಕುಂಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿ ಕಾರ್ಯಕರ್ತರ ತಂಡ ಸೋಮವಾರ ಭೋಪಾಲ್‌ಗೆ ತೆರಳಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು 45 ದಿನಗಳಲ್ಲಿ ಮೂರನೇ ಬಾರಿಗೆ ಮಧ್ಯಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಈ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್‌ನಿಂದ ಕಠಿಣ ಸವಾಲು ಎದುರಾಗಿದೆ. ಜನಸಂಘದ ಸಹ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ‘ಕಾರ್ಯಕರ್ತ ಮಹಾಕುಂಭ’ ಕಾರ್ಯಕ್ರಮದಲ್ಲಿ 10 ಲಕ್ಷ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.