ದೆಹಲಿ | ಎಎಪಿ ಕಚೇರಿ ಪೊಲೀಸರಿಂದ ‘ಸೀಲ್’; ಆರೋಪಿಸಿದ ನಾಯಕರು

0
227

ಸನ್ಮಾರ್ಗ ವಾರ್ತೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನು ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಈ ಬೆನ್ನಲ್ಲೇ ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಪೊಲೀಸರು ಎಲ್ಲ ಕಡೆಗಳಿಂದ ಸೀಲ್  ಮಾಡಿದ್ದಾರೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ. ತಮ್ಮನ್ನು ಪಕ್ಷದ ಕಚೇರಿಗೆ ಪ್ರವೇಶಿದಂತೆ ತಡೆಯಲಾಗುತ್ತಿದೆ ಎಂದು ಎಎಪಿ  ಮುಖಂಡರಾದ ಅತಿಶಿ, ಸೌರಭ್ ಭಾರದ್ವಜ್, ದುರ್ಗೇಶ್ ಪಾಠಕ್ ಮತ್ತು ಇತರರು ಆರೋಪಿಸಿದ್ದಾರೆ.

“ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಎಲ್ಲ ಕಡೆಯಿಂದಲೂ ‘ಸೀಲ್‌’ ಮಾಡಲಾಗಿದ್ದು, ಪ್ರವೇಶ ನಿರ್ಬಂಧಿಸಲಾಗಿದೆ. ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು”ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ.