ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ವರ್ಗಾವಣೆ| ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

0
313

ಸನ್ಮಾರ್ಗ ವಾರ್ತೆ

ಮಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಬ್ಬರನ್ನೂ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್ ಎಂ.ಆರ್ . ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಸ್ಮಾರ್ಟ್ ಗವರ್ನೆನ್ಸ್ ಸೆಂಟರ್ ಹೆಚ್ಚುವರಿ ನಿರ್ದೇಶಕರಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ನೂತನ ದಕ್ಷಿಣ ಕನ್ನಡ ಡಿಸಿಯಾಗಿ ನೇಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರ್ಕಾರ ಇಂದು ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.