ಟಿಎಂಸಿ ಪರ ಒಲವು ಆರೋಪ: ಪಶ್ಚಿಮ ಬಂಗಾಳ ಡಿಜಿಪಿ ವರ್ಗಾವಣೆ

0
385

ಸನ್ಮಾರ್ಗ ವಾರ್ತೆ

ನವದೆಹಲಿ: ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಕಡೆಗೆ ಒಲವು ತೋರಿದ್ದಾರೆ ಎಂದು ಆರೋಪಿಸಿ ಹಲವಾರು ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಾಗಿ ವೀರೇಂದ್ರರನ್ನು ವರ್ಗಾವಣೆ ಮಾಡಿದ್ದು ಅವರ ಸ್ಥಾನದಲ್ಲಿ ಪಿ. ನಿರಜ್ ನಯನ್ ಅವರನ್ನು ನೇಮಕ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಘೋಷಣೆಯಾಗಿದ್ದು 8 ಹಂತಗಳಲ್ಲಿ ಮತದಾನ ನಡೆಯಲಿದೆ. ಇನ್ನು ಮೇ 2ರಂದು ಫಲಿತಾಂಶ ಹೊರಬೀಳಲಿದೆ.

ಚುನಾವಣಾ ಆಯೋಗ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೀಡಿದ ನಿರ್ದೇಶನದಲ್ಲಿ ವೀರೇಂದ್ರ ಅವರಿಗೆ ‘ಚುನಾವಣೆ ನಡೆಸಲು ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧಿಸಿದ ಯಾವುದೇ ಹುದ್ದೆಯನ್ನು ನೀಡಬಾರದು’ ಎಂದು ಸೂಚಿಸಿದೆ.