ಬೆಂಗಳೂರು, ಉತ್ತರ ಕರ್ನಾಟಕದಲ್ಲಿ ಎ.11 ಗುರುವಾರ ಈದುಲ್ ಫಿತ್ರ್ ಆಚರಣೆ

0
717

ಸನ್ಮಾರ್ಗ ವಾರ್ತೆ

ಬೆಂಗಳೂರು : ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ರ್ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿ ಸಂಚಾಲಕ ಮೌಲಾನ ಮನ್ಸೂದ್ ಇಮ್ರಾನ್ ಹೇಳಿದ್ದಾರೆ.

ಅಲ್ಲದೆ, ಉತ್ತರ ಕರ್ನಾಟಕದ ಭಾಗದಲ್ಲಿಯೂ ಕೂಡ ಗುರುವಾರ ಈದುಲ್ ಫಿತ್ರ್ ಆಚರಣೆ ಮಾಡುವಂತೆ ಅಂಜುಮನ್ ಕಮಿಟಿ ಅಧ್ಯಕ್ಷ ಎ.ಎಮ್ ಹಿಂಡಸಗೇರಿ ನೇತೃತ್ವದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್‌ ಫಿತ್ರ್ ಆಚರಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತ್ರ್ ಆಚರಣೆ ನಡೆಯಲಿದೆ.

LEAVE A REPLY

Please enter your comment!
Please enter your name here