ರಸ್ತೆತಡೆ ಪ್ರತಿಭಟನೆ: ವಾಟಾಳ್ ನಾಗರಾಜ್, ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹಿರ್‌ ಹುಸೇನ್ ಬಂಧನ

0
555

ಸನ್ಮಾರ್ಗ ವಾರ್ತೆ

ಬೆಂಗಳೂರು: ರಾಜ್ಯಾದ್ಯಂತ ಹೆದ್ದಾರಿ ಹಾಗೂ ರಸ್ತೆ ತಡೆಯೊಂದಿಗೆ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ರೈತ ಪರ ಹೋರಾಟಕ್ಕೆ ಮುಂದಾದ ಕನ್ನಡಪರ ಹೋರಾಟಗಾರ, ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹಾಗೂ ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್‌ರವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಧರಣಿ ಕುಳಿತ ಪ್ರತಿಭಟನಕಾರರನ್ನು ತೆರವುಗೊಳಿಸಲು ಪೊಲೀಸರು ನಾಯಕರ ಸಹಿತ ಹಲವರನ್ನು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ, “ಪ್ರಧಾನಿ ನರೇಂದ್ರ ಮೋದಿ ಸರಕಾರ ಕೃಷಿ ಕಾನೂನು ಹಿಂಪಡೆಯಬೇಕು. ಮೋದಿ ಸರಕಾರ ಹಿಟ್ಲರ್ ನೀತಿ ಅನುಸರಿಸುತ್ತಿದೆ” ಎಂದು ವಾಟಾಳ್ ನಾಗರಾಜ್ ಕೇಂದ್ರ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.