ಸನ್ಮಾರ್ಗ ವಾರ್ತೆ
ನವದೆಹಲಿ: ಇಡೀ ದೇಶಕ್ಕೆ ಕೊರೋನ ಲಸಿಕೆ ವಿತರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಕೇಳಲಾದ ಪ್ರಶ್ನಗೆ ಉತ್ತರಿಸಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ರವರು, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಹೇಳಿದರು.
ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ ಅವರು, ” ಕೋವಿಡ್ ಗಂಭೀರ ಪರಿಣಾಮ ಬೀರಿರುವ ಜನರಿಗೆ ಲಸಿಕೆ ನೀಡುವ ಮೂಲಕ ಕೊರೋನವೈರಸ್ ಹರಡುವಿಕೆಯನ್ನು ತಡೆಯಲು ನಮ್ಮಿಂದ ಸಾಧ್ಯವಾದಲ್ಲಿ ಇಡೀ ಜನಸಂಖ್ಯೆಗೆ ಲಸಿಕೆ ನೀಡಬೇಕಾದ ಅಗತ್ಯತೆ ತಲೆದೋರುವುದಿಲ್ಲ” ಎಂದು ಹೇಳಿದರು.
Vaccination would depend on the efficacy of the vaccine & our purpose is to break the chain of #COVID19 transmission. If we're able to vaccinate critical mass of people & break virus transmission, then we may not have to vaccinate the entire population: ICMR DG Dr Balram Bhargava https://t.co/JF2vzdG7ml pic.twitter.com/OJk5QMuDFE
— ANI (@ANI) December 1, 2020