‘ಇಡೀ ದೇಶಕ್ಕೆ ಕೊರೋನ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಎಂದೂ ಹೇಳಿಲ್ಲ’- ಆರೋಗ್ಯ ಕಾರ್ಯದರ್ಶಿ

0
472

ಸನ್ಮಾರ್ಗ ವಾರ್ತೆ

ನವದೆಹಲಿ: ಇಡೀ ದೇಶಕ್ಕೆ ಕೊರೋನ ಲಸಿಕೆ ವಿತರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಕೇಳಲಾದ ಪ್ರಶ್ನಗೆ ಉತ್ತರಿಸಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರು, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಹೇಳಿದರು.

ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ ಅವರು, ” ಕೋವಿಡ್ ಗಂಭೀರ ಪರಿಣಾಮ ಬೀರಿರುವ ಜನರಿಗೆ ಲಸಿಕೆ ನೀಡುವ ಮೂಲಕ ಕೊರೋನವೈರಸ್ ಹರಡುವಿಕೆಯನ್ನು ತಡೆಯಲು ನಮ್ಮಿಂದ ಸಾಧ್ಯವಾದಲ್ಲಿ ಇಡೀ ಜನಸಂಖ್ಯೆಗೆ ಲಸಿಕೆ ನೀಡಬೇಕಾದ ಅಗತ್ಯತೆ ತಲೆದೋರುವುದಿಲ್ಲ” ಎಂದು ಹೇಳಿದರು.