ಹೊಸದಿಲ್ಲಿ, ಜೂ.27: ಹರಿಯಾಣದ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿ ಅಜ್ಞಾತರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಫರೀದಾಬಾದಿನಲ್ಲಿ ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು ಸೆಕ್ಟರ್ -9ರ ಒಂದು ಜಿಮ್ನ ಹೊರಗೆ ಕಾರಿನಿಂದ ಇಳಿಯುವ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಮುಖವಾಡ ಧರಿಸಿದ್ದ ದುಷ್ಕರ್ಮಿಗಳು ಅವರ ಮೇಲೆ ಹತ್ತಕ್ಕೂ ಹೆಚ್ಚು ಬಾರಿ ಗುಂಡು ಎಸೆದಿರುವುದು ಸಮೀಪದ ಸಿಸಿಟಿವಿ ದೃಶ್ಯಗಳಲ್ಲಿ ದಾಖಲಾಗಿದ್ದು, ಗಂಭೀರವಾಗಿ ಗಾಯಗೊಂಡ ವಿಕಾಸ್ ಚೌಧರಿಯವರನ್ನು ಆಸ್ಪತ್ರೆಗೆ ಕೂಡಲೇ ಕರೆದೊಯ್ಯಲಾಯಿತು. ಆದರೆ ಅವರು ಬದುಕಿ ಉಳಿಯಲಿಲ್ಲ.
ವಿಕಾಸ್ ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವಾರ್ ಅವರ ನಿಕಟವರ್ತಿಯಾಗಿದ್ದರು. ಅವರು ಹಿಂದೆ ನ್ಯಾಶನಲ್ ಲೋಕ ದಳದಲ್ಲಿದ್ದರು. 2015ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.