ಹಿಜಾಬ್ ಹೋರಾಟದ ಹಿಂದೆ ವಿದೇಶಿ ಕೈವಾಡವಿದೆ: ಕಂದಾಯ ಸಚಿವ ಆರ್ ಅಶೋಕ್

0
362

ಸನ್ಮಾರ್ಗ ವಾರ್ತೆ

ಉಡುಪಿ: ಹಿಜಾಬ್ ಪ್ರತಿಭಟನೆಯ ಹಿಂದೆ ಬಹಳಷ್ಟು ಜನ ಇದ್ದಾರೆ.ಹೋರಾಟ ಹಿಂದೆ ವಿದೇಶಿ ಕೈವಾಡ, ಷಡ್ಯಂತ್ರ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಪ್ರತಿಭಟನೆ ಮಾಡುತ್ತಿರುವುದು ವಿದ್ಯಾರ್ಥಿನಿಯರ ತಪ್ಪಿನಿಂದ ಅಲ್ಲ.
ಉಡುಪಿಯಲ್ಲಿ ಆರಂಭವಾದ ಹೋರಾಟ ಇಡೀ ಪ್ರಪಂಚಕ್ಕೆ ಹೋಗಿದ್ದು ಹೇಗೆ? ಇಷ್ಟು ಫಾಸ್ಟ್ ಆಗಿ ಇದರ ಹಿಂದೆ ಯಾರು ಕೆಲಸ ಮಾಡುತ್ತಿದ್ದಾರೆ? ಹಿಜಬ್ ಹೋರಾಟವನ್ನು ಮಕ್ಕಳು ಪ್ರಪಂಚಕ್ಕೆ ಹಬ್ಬಿಸಿದ್ರಾ? ಇದರ ಹಿಂದೆ ಐಸಿಸ್ ಕೆಎಫ್‌ಡಿ ಮತ್ತಿತರರ ಸಂಘಟನೆಗಳ ಕೈವಾಡ ಇದೆ ಅಂತ ಆರೋಪಿಸಿದರು.

ಮಕ್ಕಳು ಶಾಲೆಗೆ ಹೋಗೋದು ವಿದ್ಯಾಭ್ಯಾಸಕ್ಕೆ ಧರ್ಮ ಪ್ರಚಾರಕ್ಕೆ ಶಾಲೆಗೆ ಹೋಗುತ್ತಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ಯಾವುದೇ ಧರ್ಮವಾದರೂ ಶಾಲೆಗೆ ಹೋಗುವುದು ಧರ್ಮಪ್ರಚಾರಕ್ಕೆ ಅಲ್ಲ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ. ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಹಿಜಾಬ್ ಹೋರಾಟ ಮಾಡಿ ಎಂದು ಐಸಿಸ್ ಹೇಳಿಕೊಟ್ಟಿದೆ ಎಂದು ಅವರು ಆರೋಪಿಸಿದರು.

ಮಕ್ಕಳು ಇರುವುದರಿಂದ ನಾವು ಹೆಚ್ಚು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ನಾವು ಹಂತ ಹಂತವಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಹಿಜಾಬ್ ಹೋರಾಟದ ಸಮಗ್ರ ತನಿಖೆ ಆಗಬೇಕು. ಈ ಬಗ್ಗೆ ನಾನು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಹೋರಾಟದ ಹಿಂದಿನ ದುರುಳರು ಭಯೋತ್ಪಾದಕರನ್ನು ಹೊರಗೆ ಎಳೆಯಬೇಕಾಗಿದೆ ಎಂದು ಅವರು ಹೇಳಿದರು.