ಶ್ರೀನಿವಾಸ ಕಾಲೇಜಿನಲ್ಲಿ ರಾಷ್ಟ್ರ ಲಾಂಛನಕ್ಕೆ ಅವಮಾನ ಅಕ್ಷಮ್ಯ ಅಪರಾಧ; ಎಂ. ದಿವಾಕರ್ ರಾವ್

0
98

ಸನ್ಮಾರ್ಗ ವಾರ್ತೆ

ದಕ್ಷಿಣ ಕನ್ನಡ ಜಿಲ್ಲೆಯ ವಲಚ್ಚಿಲ್ ಶ್ರೀನಿವಾಸ ಕಾಲೇಜಿನ ಆವರಣದ ರಾಷ್ಟ್ರ ಲಾಂಛನವಿರುವ ಧ್ವಜ ಸ್ಥಂಭದಲ್ಲಿ ಕೋಮು ಮನಸ್ಥಿತಿಯ ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಹಾರಿಸಿ ರಾಷ್ಟ್ರ ಲಾಂಛನಕ್ಕೆ ಅವಮಾನ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ದ.ಕ. ಜಿಲ್ಲಾ ಉಪಾಧ್ಯಕ್ಷರಾದ ಎಂ. ದಿವಾಕರ್ ರಾವ್ ಹೇಳಿದ್ದಾರೆ.

ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮೌನ ಸಮ್ಮತಿಯನ್ನು ನೀಡಿರುವುದು ಶಿಕ್ಷಣ ಕ್ಷೇತ್ರಕ್ಕೆ ಮಾಡಿದ ಅವಮಾನ. ಸುಮೊಟೊ ಕೇಸ್ ದಾಖಲಿಸಬೇಕಾದ ಜಿಲ್ಲೆಯ ಪೊಲೀಸ್ ಇಲಾಖೆ ವಿಫಲವಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಿ ದೇಶದ್ರೋಹ ಮಾಡಿದ ಶ್ರೀನಿವಾಸ ಕಾಲೇಜು ಹಾಗೂ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುಧ್ಧ ಶೀಘ್ರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸೊಮೊಟೊ ಪ್ರಕರಣ ದಾಖಲಿಸದೆ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ವರ್ಗಾವಣೆ ಮಾಡಬೇಕು ಹಾಗೂ ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಬೇಕೆಂದು ಅವರು ಆಗ್ರಹಿಸಿದ್ದಾರೆ.