ಸನ್ಮಾರ್ಗ ವಾರ್ತೆ
ಮಂಗಳೂರು,ಆ.4: ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಸಮಾಜ ಸೇವಾ ಘಟಕದ ವತಿಯಿಂದ
ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿನ ಬಡಕುಟುಂಬದ ಮನೆಯೊಂದನ್ನು ದಾನಿಗಳ ನೆರವಿನಿಂದ ಸಂಗ್ರಹಿಸಿದ ಸುಮಾರು ಎರಡು ಲಕ್ಷ ರೂಪಾಯಿ ವ್ಯಯಿಸಿ ದುರಸ್ತಿಗೊಳಿಸಿ, ಚೆಂದ ಮಾಡಿಸಿ ಕೊಡಲಾಯಿತು. ಈ ಸತ್ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಜಮಾಅತೆ ಇಸ್ಲಾಮೀ ಹಿಂದ್ ಕೃತಜ್ಞತೆ ಸಲ್ಲಿಸಿದೆ.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.