ಸಚಿವ ದಿನೇಶ್ ಗುಂಡೂ ರಾವ್ ರಿಂದ ಜುಲೈ 08 ರಂದು ಬೆಳ್ತಂಗಡಿಯಲ್ಲಿ ಜನತಾ ದರ್ಶನ

0
97

ಸನ್ಮಾರ್ಗ ವಾರ್ತೆ

ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್ ರವರು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ, ಲಾಯಿಲ ಜಂಕ್ಷನ್ ಹತ್ತಿರ, ಜ್ಯೋತಿ ಆಸ್ಪತ್ರೆ ಮುಂಭಾಗ ಇರುವ ಸಂಗಮ ಸಭಾ ಭವನದಲ್ಲಿ ದಿನಾಂಕ: 08-07-2023 ರಂದು ಮಧ್ಯಾಹ್ನ 03-00 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರೀಕರು, ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಕುಂದು-ಕೊರತೆ ಅಹವಾಲುಗಳನ್ನು ಸಲ್ಲಿಸುವಂತೆ ಬೆಳ್ತಂಗಡಿ ತಹಶಿಲ್ದಾರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.