ಬಿಜೆಪಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕೊನೆಯ ಬೆಂಚ್ ನಲ್ಲಿದ್ದಾರೆ: ರಾಹುಲ್ ಗಾಂಧಿ ವ್ಯಂಗ್ಯ

0
485

ಸನ್ಮಾರ್ಗ ವಾರ್ತೆ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡುತ್ತ ಯುವಕರ ನಾಯಕನಾಗಿ ಗುರುತಿಸಿಕೊಂಡಿದ್ದ ಜ್ಯೋತಿ ರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಮೇಲೆ ಅವರು ಸದ್ಯ ಕೊನೆಯ ಬೆಂಚ್ ನಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಜೊತೆ ಇನ್ನೂ ಕೆಲಸ ಮಾಡಿದ್ದಿದ್ದರೆ ಅವರಿಗೆ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಬಿಜೆಪಿ ಸೇರಿದ ಬಳಿಕ ಮೂಲೆ ಗುಂಪಾಗಿದ್ದರೆ ಎಂದು ರಾಹುಲ್ ಹೇಳಿದರು.

ಸಂಘಟನೆಯ ಮಹತ್ವದ ಕಾಂಗ್ರೆಸ್ ನ ಯುವ ವಿಭಾಗದೊಂದಿಗೆ ಮಾತನಾಡುತ್ತಿದ್ದ ಅವರು, “ಅವರು (ಸಿಂಧಿಯಾ) ಅವರು ಕಾಂಗ್ರೆಸ್ ಜೊತೆ ಉಳಿದುಕೊಂಡಿದ್ದರೆ ಅವರು ಮುಖ್ಯಮಂತ್ರಿಯಾಗಬಹುದಿತ್ತು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕೆಲಸ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಆಯ್ಕೆಯನ್ನು ಅವರಿಗೆ ಕೊಟ್ಟಿದ್ದೆ. ಆದರೆ ಅವರು ಬಿಜೆಪಿ ಸೇರುವ ಮೂಲಕ ಅನ್ಯ ಮಾರ್ಗವನ್ನು ಆರಿಸಿಕೊಂಡರು ಎಂದು ರಾಹುಲ್ ಹೇಳಿದರು.

“ನಾವು ಹೇಳಿರುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿರಿ. ಅವರು ಎಂದಿಗೂ ಬಿಜೆಪಿಯಲ್ಲಿದ್ದುಕೊಂಡು ಮುಖ್ಯಮಂತ್ರಿಯಾಗುವುದಿಲ್ಲ. ಅದಕ್ಕಾಗಿ ಅವರು ಮತ್ತೆ ಕಾಂಗ್ರೆಸ್ ಗೆ ಹಿಂತಿರುಗಬೇಕಾಗಬಹುದು” ಎಂದು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಆರ್‌ಎಸ್‌ಎಸ್‌ನ ಸಿದ್ಧಾಂತದ ವಿರುದ್ಧ ಹೋರಾಡಲು ಇಂದಿಗೂ ಹೆದರಬೇಡಿ ಎಂದು ಅವರು ಯುವ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದರು. ಜ್ಯೋತಿ ರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಳೆದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರಿದ್ದರು.