ಸನ್ಮಾರ್ಗ ವಾರ್ತೆ
ಬೆಂಗಳೂರು,ಅ.13: ರೈತರನ್ನು ಭಯೋತ್ಪಾದಕರು ಎಂದು ಕರೆದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ನ್ಯಾಯಾಲಯದ ಆದೇಶದಂತೆ ದೂರು ದಾಖಲಾಗಿದೆ.
ತುಮಕೂರಿನ ಪಿಸಿಜೆ ಮತ್ತು ಜೆಎಂಎಫ್ಸ ನ್ಯಾಯಾಲಯ ಇತ್ತೀಚೆಗೆ ನಟಿ ವಿರುದ್ಧ ದೂರು ದಾಖಲಿಸುವಂತೆ ಸ್ಥಳೀಯ ಪೋಲೀಸ್ ಠಾಣೆಗೆ ನಿರ್ದೇಶನ ನೀಡಿತ್ತು. ಈ ಆದೇಶದ ಅನ್ವಯ ನಟಿ ಕಂಗನಾ ರಾಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.