ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೇಟ್ ನೀಡಬೇಕು- ಎಂ.ಜಾಫರ್ ಸಾಬ್ ಒತ್ತಾಯ

0
330

ಸನ್ಮಾರ್ಗ ವಾರ್ತೆ

ಕೋಲಾರ: ಮುಂದಿನ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ವರಿಷ್ಠರು ಮುಂದಾಗಬೇಕು ಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡ ಎಂ.ಜಾಫರ್ ಸಾಭ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅವಿಭಜಿತ ಕೋಲಾರ ಜಿಲ್ಲೆಯಲ್ಲಿ 11 ವಿಧಾನ ಸಭಾ ಕ್ಷೇತ್ರಗಳು ಇದ್ದು ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು,‌ ಸುಮಾರು 40 ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಸಮುದಾಯದ ಮತದಾರಿದ್ದಾರೆ. ಯಾವುದೇ ಚುನಾವಣೆ ನಡೆದರೂ ಅಲ್ಪಸಂಖ್ಯಾತರು ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿರುತ್ತಾರೆ ಅದರಿಂದ ಅಲ್ಪಸಂಖ್ಯಾತರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೇವಲ ಕೋಲಾರ ವಿಧಾನ ಸಭಾ ಕ್ಷೇತ್ರದಿಂದ ಮಾತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಲ್ಪಸಂಖ್ಯಾತ ಮುಸ್ಲಿಂ ಜನಾಂಗದವರಿಗೆ ಸ್ಪರ್ಧಿಸಲು ಪ್ರಬಲವಾದ ಅವಕಾಶವಿದ್ದು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೂ ಅಲ್ಪಸಂಖ್ಯಾತ ಸಮುದಾಯ ಬೆಂಬಲವಾಗಿದ್ದಾರೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೇ ಸೋಲು ಖಚಿತವಾಗುತ್ತದೆ ಇದನ್ನು ಕಾಂಗ್ರೆಸ್ ಹೈಕಮಾಂಡ್ ಗಮನಹರಿಸಬೇಕು ಎಂದರು

ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಈಗಾಗಲೇ ಕೆಲವು ಹೆಸರುಗಳು ಚಾಲ್ತಿಯಲ್ಲಿವೆ ಆದರೆ ಅವುಗಳಿಗೆ ಮಾನ್ಯತೆ ನೀಡಬಾರದು ಅಲ್ಪಸಂಖ್ಯಾತ ಮುಸ್ಲಿಂ ಜನಾಂಗಕ್ಕೆ ಇರುವ ಒಂದೇ ಒಂದು ಅವಕಾಶವನ್ನೂ ಬೇರೆಯವರಿಗೆ ನೀಡಿ ಅನ್ಯಾಯವೆಸಗಬಾರದು ಹಾಗೂ ಬೇರೆ ಕಡೆಯಿಂದ ಬರುವ ಅಭ್ಯರ್ಥಿಗಳಿಗೆ ಅವಕಾಶ ನೀಡಬಾರದು ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎರಡನೇ ಸ್ಥಾನ ಪಡೆದು ಸೋಲು ಕಂಡಿದ್ದರೂ ಈ ಬಾರಿ ಗೆಲ್ಲುವ ಅವಕಾಶಗಳು ಹೆಚ್ಚು ಇರುವುದರಿಂದ ಸ್ಥಳೀಯ ಅಲ್ಪಸಂಖ್ಯಾತ ಮುಸ್ಲಿಂ ಜನಾಂಗದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶಗಳು ಕಲ್ಪಿಸಬೇಕು,ಒಂದು ವೇಳೆ ಮಾಜಿ ಮುಖ್ಯ ಮಂತ್ರಿ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋಲಾರದಲ್ಲಿ ಸ್ಪರ್ಧಿಸಲು ಇಚ್ಚಿಸಿದರೆ ತಾಲ್ಲೂಕಿನ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ವಿರೋಧವಿಲ್ಲದೆ ಅವರ ಗೆಲುವಿಗೆ ಮುಸ್ಲಿಂ ಜನಾಂಗ ಶ್ರಮಿಸುವುದಾಗಿ ಹೇಳಿದರು.

ಒಕ್ಕಲಿಗರಿಗೆ, ಎಸ್.ಸಿ,ಎಸ್.ಟಿ ಗಳಿಗೆ ಈಗಾಗಲೇ ಬೇರೆ ಕ್ಷೇತ್ರಗಳಲ್ಲಿ ಅವಕಾಶಗಳು ಇದ್ದು,ಇರುವ ಒಂದು ಅವಕಾಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನೀಡುವ ಮೂಲಕ ಈ ಭಾರಿ ಅಲ್ಪಸಂಖ್ಯಾತ ಮುಸ್ಲಿಂ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕು ಈ ಪತ್ರಿಕಾಗೋಷ್ಠಿಯಲ್ಲಿ ಮಾಜಿ ನಗರಸಭೆ ಸದಸ್ಯ ಸಲ್ಲಾವುದ್ದೀನ್ ಬಾಬು, ಮುಸ್ಲಿಂ ಸಮುದಾಯದ ಮುಖಂಡರಾದ ಟೈರು ಅಫ್ಸರ್, ಸಮೀರ್ ಅಹಮದ್, ಷೇಕ್ ಫಯಾಸ್ವುದೀನ್, ಯೂನಸ್ ಖಾನ್, ಅಲ್ಲತಾಫ್ ಪಾಷ, ಸೀಪೂರು ಅಸ್ಲಾಂ, ಮೌಲಿ ಜುನೇದ್ ಪಾಷ ಇದ್ದರು.

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ