ಭಾರತ-ಚೀನಾ ಸಂಘರ್ಷ; ಅಯೋಧ್ಯೆ ರಾಮಮಂದಿರ ಮಂದಿರ ನಿರ್ಮಾಣ ಮುಂದೂಡಿಕೆ

0
439

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಜೂ.20: ಭಾರತ-ಚೀನಾ ಗಡಿ ಘರ್ಷಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾರತದ ಸೈನಿಕರು ಹತರಾದ ಹಿನ್ನೆಲೆಯಲ್ಲಿ ರಾಮಮಂದಿರ ಟ್ರಸ್ಟ್ ನಿರ್ಮಾಣವನ್ನು ಮುಂದೂಡಿದ್ದು, ಹೊಸ ದಿನಾಂಕವನ್ನು ನಂತರ ನಿಶ್ಚಯಿಸಲಿದೆ.

ದೇಶದ ಪರಿಸ್ಥಿತಿಯನ್ನು ಪರಿಗಣಿಸಿ ತಾರೀಕನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರ ತಿಳಿಸಿದರು. ಭಾರತ-ಚೀನಾ ಘರ್ಷಣೆ ಗಂಭೀರವಾಗಿ ಮುಂದುವರಿದಿದ್ದು, ದೇಶ ರಕ್ಷಣೆ ಮುಖ್ಯ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.