ಮಂಗಳೂರು; ಕರ್ಕಶ ಹಾರ್ನ್ ಗಳ ವಿರುದ್ಧ ಕ್ರಮ

0
1207

ಸನ್ಮಾರ್ಗ ವಾರ್ತೆ

ಮಂಗಳೂರು ನಗರದಲ್ಲಿ ಕರ್ಕಶ ಹಾರ್ನ್ ಅಳವಡಿಸಿರುವ ಬಸ್‌ಗಳ ವಿರುದ್ಧ ಇಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ಡಿಸಿಪಿ (ಅಪರಾಧ ಹಾಗೂ ಸಂಚಾರ ವಿಭಾಗ) ಬಿ.ಪಿ.ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ಮತ್ತು ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದರು.

ನಾಲ್ಕು ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 103 ಪ್ರಕರಣಗಳು ದಾಖಲಾಗಿದ್ದು, 51,500ರೂ. ದಂಡ ವಿಧಿಸಲಾಗಿದೆ. ಅಲ್ಲದೇ, 44 ಹಾರ್ನ್‌ಗಳನ್ನು ತೆರವುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here