ಸನ್ಮಾರ್ಗ ವಾರ್ತೆ
ಮಂಗಳೂರು, ಜೂ. 28: ಕೊರೋನಕ್ಕೆ ಬಲಿಯಾದ ಯುವಕನ ಅಂತ್ಯ ಸಂಸ್ಕಾರವನ್ನು ಬೋಳಾರದ ಮಸೀದಿಯ ಆವರಣದಲ್ಲಿರುವ ದಫನ ಭೂಮಿಯಲ್ಲಿ ನಡೆಸುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ವಿಷಯವನ್ನರಿತು ಸ್ಥಳಕ್ಕಾಗಮಿಸಿದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ರವರು ಮಧ್ಯಪ್ರವೇಶಿಸಿ ಕೊರೋನಾ ಮೃತರಿಂದ ಹರಡುವುದಿಲ್ಲ ಎಂಬುದನ್ನು ಮನವರಿಕೆ ಮಾಡಿದರಲ್ಲದೇ ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದರು. ಬೋಳಾರದಲ್ಲೇ ದಫನ ಕಾರ್ಯವನ್ನು ಸಂಜೆಯ ಸುಮಾರಿಗೆ ನೆರವೇರಿಸಲಾಯಿತು.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.