ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ಇನ್ನಿಲ್ಲ

0
820

ಸನ್ಮಾರ್ಗ ವಾರ್ತೆ

ಬೆಂಗಳೂರು, ಮೇ.3: ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ನಿಧನರಾದರು. ಇತ್ತೀಚೆಗೆ ಅನಾರೋಗ್ಯದಿಂದ ನಿಸಾರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಕೆ.ಎಸ್ ನಿರಾಸ್ ಅಹಮ್ಮದ್ ಅವರ ನಿತ್ಯೋತ್ಸವ ಹಾಡು ಸಾಕಷ್ಟು ಪ್ರಸಿದ್ದಿಗಳಿಸಿದ ಹಾಡಾಗಿದೆ. 1935 ಫೆಬ್ರವರಿ 5 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ಜನಿಸಿದ ಇವರು ಕನ್ನಡ ನಾಡು ನುಡಿಗೆ ಕೊಟ್ಟ ಕೊಡುಗೆ ಅಪಾರ.

1981 ರಾಜ್ಯೋತ್ಸವ ಪ್ರಶಸ್ತಿ, 2008 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿ ಸೇರಿದಂತೆ ತಮ್ಮ ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಭಾನುವಾರ ಮಧ್ಯಾಹ್ಮ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.