ಇಂದು ಸಂಜೆ 7 ಗಂಟೆ ಬಳಿಕ ಬೀಚ್ ಗೆ ತೆರಳುವುದಕ್ಕೆ ನಿರ್ಬಂಧ ಹೇರಿದ ದ.ಕ. ಜಿಲ್ಲಾಧಿಕಾರಿ

0
479

ಸನ್ಮಾರ್ಗ ವಾರ್ತೆ

ಮಂಗಳೂರು: ಮಂಗಳೂರಲ್ಲಿ ಇಂದು ಸಂಜೆ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರೀ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಿರ್ಬಂಧವನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಜರಗಿಸುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.