ಸನ್ಮಾರ್ಗ ವಾರ್ತೆ
ಕದನ ವಿರಾಮಕ್ಕಾಗಿ ವಿಶ್ವ ಸಂಸ್ಥೆಯಲ್ಲಿ ಸಲ್ಲಿಸಿದ್ದ ನಿರ್ಣಯದ ಪರ ಭಾರತ ಮತ ಹಾಕದೇ ಇರುವುದು ಮತ್ತು ರಾಜ್ಯ ಸರಕಾರವು ಫೆಲೆಸ್ತೀನ್ ಪರ ಪ್ರತಿಭಟಣೆಯನ್ನು ಹತ್ತಿಕ್ಕುತ್ತಿರುವುದನ್ನು ಖಂಡಿಸಿ ಇಂದು ‘ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು’ ಒಕ್ಕೂಟದ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಈ ಪತ್ರಿಕಾ ಗೋಷ್ಠಿಯಲ್ಲಿ PUCL ನ ಶ್ರೀ ಆಕಾರ್ ಪಟೇಲ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್ನ, ಕರ್ನಾಟಕ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ, AICCTU ನ ರಾಷ್ಟ್ರೀಯ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜಾರಿಯೋ, ಪಿಯುಸಿಎಲ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ ನಾರಾಯಣ್, ಕರ್ನಾಟಕ ಜನಶಕ್ತಿಯ ಗೌರಿ, ಯುವ ಪರಿಸರವಾದಿಗಳಾದ ನಿಶ್ಕಲಾ ಭಾಗವಹಿಸಿದ್ದರು.