ಸನ್ಮಾರ್ಗ ವಾರ್ತೆ
ಮಂಗಳೂರು: ಪ್ರಧಾನಿ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು ಅವರನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ಆರಂಭಗೊಂಡಿದೆ. ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಭದ್ರತೆ ಸೇರಿದಂತೆ ಪೂರಕ ಸಿದ್ಧತೆಗಳ ಸಭೆ ನಡೆಸತೊಡಗಿದ್ದಾರೆ. ಸಮಾವೇಶ ನಡೆಯಲಿರುವ ಗೋಲ್ಡ್ಫಿಂಚ್ ಸಿಟಿ, ಪ್ರಧಾನಿ ವಾಸ್ತವ್ಯ ನಿಲ್ಲುವ ಸಕ್ರ್ಯೂಟ್ ಹೌಸ್ನ ಸುತ್ತಮುತ್ತ ಈಗಲೇ ಸಿದ್ಧತೆಗಳು ಆರಂಭಗೊಂಡಿದೆ.
ಸೆ.೨ರಂದು ಬೆಳಗ್ಗೆ ಕೊಚ್ಚಿನ್ ಶಿಫ್ಯಾರ್ಡ್ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ವಿಕ್ರಾಂತ್ ಯುದ್ಧವಾಹಕ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡುವರು. ಮಧ್ಯಾಹ್ನ ಮಂಗಳೂರಿಗೆ ಆಗಮಿಸಿ ಎನ್ಎಂಪಿಎ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನವಮಂಗಳೂರು ಬಂದರಿಗೆ ಭೇಟಿ ನೀಡುವ ಪ್ರಧಾನಿ, ಅಲ್ಲಿ ಅನಘಾ ರಿಫೈನರಿ, ಬರ್ತ್ ನಂ.೧೪ ಸೇರಿದಂತೆ ೬ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಂಜೆ ೪ ಗಂಟೆಗೆ ಕುಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಕಾರಣ ಸಾವಿರಾರು ಜನರು ಕುಳಿತುಕೊಳ್ಳಲು ಅನುಕೂಲವಾಗುವಂತೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಟಿನ್ ಶೀಟ್ ಛಾವಣಿ ಹಾಕಲು ಆಡಳಿತ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.