ಸನ್ಮಾರ್ಗ ವಾರ್ತೆ
ನವದೆಹಲಿ: ಪಿಎಂ ನರೇಂದ್ರ ಮೋದಿಯವರ ‘ಆಂದೋಲನ್ ಜೀವಿ’ ಹೇಳಿಕೆಯನ್ನು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ.
“ಅವರು(ಪ್ರಧಾನಿ ನರೇಂದ್ರ ಮೋದಿ) ತಮ್ಮ ರಾಜಕೀಯ ವೃತ್ತಿಜೀವನವನ್ನು ಆಂದೋಲನದ ಮೂಲಕ ಕಟ್ಟಿಕೊಂಡಿದ್ದೇನೆ ಎಂದು ಈ ಹಿಂದೆ ಹೇಳುತ್ತಿದ್ದರು, ಈಗ ‘ಆಂದೋಲನ್ ಜೀವಿ’ಗಳು ಎಂದು ಹೇಳುವ ಮೂಲಕ ರೈತರನ್ನು ಅವಮಾನಿಸಿದ್ದಾರೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಪ್ರತಿಭಟನೆ ನಡೆದಲ್ಲೆಲ್ಲಾ ‘ಆಂದೋಲನ್ ಜೀವಿ’ಗಳನ್ನು ಗುರುತಿಸಬಹುದು ಎಂದು ಹೇಳಿದ್ದರು. ಪ್ರಧಾನಿಯವರ ಈ ಹೇಳಿಕೆಗೆ ರೈತರಿಂದಲೂ ಕೂಡ ಕಠಿಣ ಟೀಕೆಗಳು ವ್ಯಕ್ತವಾಗಿದ್ದು, ಬಿಜೆಪಿ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಆಂದೋಲನ ನಡೆಸಿಲ್ಲ ಎಂದು ಕುಟುಕಿದ್ದರು.